ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಖೈದಿಗಳಿಗೆ ರಾಜಾತಿಥ್ಯದ ವೀಡಿಯೋಗಳು ವೈರಲ್ ಆಗಿದ್ದ ಪ್ರಕರಣದ ಸಂಬಂಧ ನಟ ಧನ್ವೀರ್ ಇಂದು ಎರಡನೇ ಬಾರಿಗೆ ವಿಚಾರಣೆಗೆ ಹಾಜರಾಗಲಿದ್ದಾರೆ.
ವೀಡಿಯೋ ವೈರಲ್ ಪ್ರಕರಣದಲ್ಲಿ ಧನ್ವೀರ್ ಪಾತ್ರದ ಬಗ್ಗೆ ಅನುಮಾನಗೊಂಡಿದ್ದ ಪೊಲೀಸರು, ಧನ್ವೀರ್ ಮೊಬೈಲ್ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ವೇಳೆ ಮೊಬೈಲ್ನಲ್ಲಿ ಯಾವುದೇ ವೀಡಿಯೋ ಇರಲಿಲ್ಲ. ಆದರೆ ಪೊಲೀಸರ ಮಾಹಿತಿ ಪ್ರಕಾರ ಧನ್ವೀರ್ ಮೊಬೈಲ್ನಿಂದ ಕೆಲವರಿಗೆ ವೀಡಿಯೋಗಳು ಸೆಂಡ್ ಆಗಿರುವುದು ಗೊತ್ತಾಗಿತ್ತು. ಮೊಬೈಲ್ ರಿಟ್ರೀವ್ ರಿಪೋರ್ಟ್ ಲಭ್ಯವಾಗಿದ್ದು, ಧನ್ವೀರ್ ಪಾತ್ರದ ಬಗ್ಗೆ ಕೆಲ ಮಹತ್ವದ ದಾಖಲೆಗಳು ಪತ್ತೆಯಾಗಿವೆ ಎನ್ನಲಾಗಿವೆ. ಹಾಗಾಗಿ ಎರಡನೇ ಬಾರಿಗೆ ವಿಚಾರಣೆಗೆ ಬರುವಂತೆ ಸೂಚಿಸಿದ್ದಾರೆ.
ಇದನ್ನೂ ಓದಿ: ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ‘ವೃಕ್ಷಮಾತೆ’ ತಿಮ್ಮಕ್ಕನ ಅಂತ್ಯಕ್ರಿಯೆ



















