ಬೆಂಗಳೂರು : ಡಾ. ವಿಷ್ಣುವರ್ಧನ್ 75ನೇ ಜನ್ಮದಿನೊತ್ಸವ ಹಿನ್ನೆಲೆಯಲ್ಲಿ ಕನ್ನಡ ಚಿತ್ರರಂಗದ ಹಿರಿಯ ನಟಿಯರಾದ ಜಯಮಾಲಾ, ಶೃತಿ, ಮಾಳವಿಕ ಅವಿನಾಶ್, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ.
ಬೇಟಿಯ ಬಳಿಕ ವರದಿಗಾರರೊಂದಿಗೆ ಮಾತನಾಡಿದ ಹಿರಿಯ ನಟಿ ಜಯಮಾಲ, ಇದೇ ಸೆ.18ರಂದು ಹಿರಿಯ ನಟ ಡಾ. ವಿಷ್ಣುವರ್ಧನ್ ಅವರ 75ನೇ ವರ್ಷ
ಜನ್ಮದಿನೊತ್ಸವವಿದೆ. ವಿಷ್ಣುವರ್ಧನ್ ಅವರಿಗೆ ಮರಣೋತ್ತರ “ಕರ್ನಾಟಕ ರತ್ನ” ಪ್ರಶಸ್ತಿ ನೀಡುವಂತೆ ಸಿಎಂ ಮತ್ತು ಡಿಸಿಎಂ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇವೆ. ಸಿಎಂ, ಡಿಸಿಎಂ ಇಬ್ಬರೂ ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿದ್ದಾರೆ.
ಇನ್ನು, ಇತ್ತಿಚಿಗಷ್ಟೇ ನಿಧನವಾಗಿರುವ ಕನ್ನಡ ಹಿರಿಯ ನಟಿ ಬಿ. ಸರೋಜಾದೇವಿ ಅವರಿಗೂ “ಕರ್ನಾಟಕ ರತ್ನ” ನೀಡಬೇಕು ಹಾಗೂ ಅವರು ವಾಸವಿದ್ದ ಮನೆಯ ರಸ್ತೆಗೆ ಅವರ ಹೆಸರನ್ನು ನಾಮಕರಣ ಮಾಡಬೇಕೆಂದು ಮನವಿ ಮಾಡಿದ್ದೇವೆ.
ಮುಖ್ಯಮಂತ್ರಿಗಳು ಇದು ನಮ್ಮ ಕರ್ತವ್ಯ ಎಂದಿದ್ದಾರೆ. ಚಿತ್ರೋದ್ಯಮ ಮತ್ತು ಅಭಿಮಾನಿಗಳು ಖುಷಿಪಡುವ ಕೆಲಸ ಮಾಡುತ್ತೇವೆ ಎಂದು ತಿಳಿಸಿರುವುದಾಗಿ ಎಂದು ಹೇಳಿದ್ದಾರೆ.


















