ಕೊಪ್ಪಳ ಜಿಲ್ಲೆಯಲ್ಲಿ ಮಳೆಗೆ ಸೇತುವೆಯ ಮೇಲೆ ನೀರು ಹಳ್ಳದಂತೆ ಹರಿಯುತ್ತಿದ್ದು, ವಾಹನ ಸವಾರರು ಪರದಾಟ ನಡೆಸುವಂತಾಗಿದೆ. ಕೊಪ್ಪಳ ತಾಲೂಕಿನ ಹೊಸಲಿಂಗಾಪುರ ಬಳಿಯಲ್ಲಿರುವ ತುಂಗಭದ್ರಾ ಎಡದಂಡೆ ನಾಲೆಯ ಮೇಲೆ ಇರುವ ಸೇತುವೆ ತುಂಬಿ ಹರಿಯುತ್ತಿದೆ. 60 ವರ್ಷ ಹಳೆಯದಾಗಿರುವ ಸೇತುವೆ.
ಹುಲಿಗಿ ಮಾರ್ಗವಾಗಿ ಹೊಸಪೇಟೆ ಗಂಗಾವತಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಮಳೆಯ ನೀರು ನಿಂತಿರುವುದರಿಂದ ವಾಹನ ಸಂಚಾರಿಗಳು ಸಂಕಷ್ಟ ಪಡುವಂತಾಗಿದೆ. ಶಾಲಾ- ಕಾಲೇಜು ವಿದ್ಯಾರ್ಥಿಗಳಂತೂ ಹರಸಾಹಸ ಪಟ್ಟು ಸಾಗುವಂತಾಗಿದೆ. ಈ ಕುರಿತು ಸ್ಥಳೀಯ ಶಾಸಕರಿಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲವೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.