ಬಾಗಲಕೋಟೆ: ಜಿಲ್ಲೆಯ ಹಲವೆಡೆ ಶನಿವಾರ ಭಾರೀ ಮಳೆಯಾಗುತ್ತಿದ್ದು, ಕೆಲವು ಅವಾಂತರಗಳು ಸೃಷ್ಟಿಯಾಗಿವೆ.
ಜಿಲ್ಲೆಯ ಜಮಖಂಡಿಯಲ್ಲಿ ಭಾರೀ ಮಳೆಯಾಗಿದೆ. ಮಳೆಯಿಂದಾಗಿ ಜಮಖಂಡಿ ಬಸ್ ನಿಲ್ದಾಣದೊಳಗೆ ನೀರು ನುಗ್ಗಿದ್ದು ಪ್ರಯಾಣಿಕರು ಪರದಾಡಿದ್ದಾರೆ. ನಿಲ್ದಾಣದೊಳಗೆ ನೀರು ನುಗ್ಗಿದ್ದರಿಂದಾಗಿ ಬಸ್ ಗಾಗಿ ಕಾಯುತ್ತಿದ್ದವರು ಪರದಾಡಿದ್ದಾರೆ. ನೀರನಲ್ಲೇ ನಿಂತು ಬಸ್ ಹತ್ತಿ ಹೋಗಿದ್ದಾರೆ.
ರಾಜ್ಯದ ಹಲವೆಡೆ ಮತ್ತೆ ಮುಂಗಾರು ಮಳೆ ಚುರುಕುಗೊಂಡಿದೆ. ಜೂ.11ರಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 9ರಿಂದಲೇ ಮತ್ತೆ ಮಳೆಯಾಗುವ ಮುನ್ಸೂಚನೆ ಇದ್ದು, ರೈತರು ಮಳೆಗಾಗಿ ಕಾಯುತ್ತಿದ್ದಾರೆ.