ಬೆಂಗಳೂರು: ಪೆಹಲ್ಗಾಮ್ ದಾಳಿಗೆ ಪ್ರತಿಯಾಗಿ ನಮ್ಮ ಭಾರತೀಯ ಸೇನೆ ಆಪರೇಷನ್ ಸಿಂಧೂರ ಮೂಲಕ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದೆ. ಈ ಕಾರ್ಯ ಯಶಸ್ವಿಯಾಗಲೆಂದು ಪ್ರಾರ್ಥಿಸಿ ‘ರಾಷ್ಟ್ರರಕ್ಷಣೆಗಾಗಿ ನಾವೆಲ್ಲರೂ’ ಎಂಬ ಘೋಷವಾಕ್ಯದಡಿ ಇಂದು ವಿದ್ಯಾರಣ್ಯಪುರದ ಎನ್ಟಿಎ ಆಟದ ಮೈದಾನದಿಂದ ಸಹಕಾರ ನಗರದ ಗಣೇಶ ದೇವಸ್ಥಾನದ ತನಕ ನಡಿಗೆಯನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ನಿವೃತ್ತ ಏರ್ ಮಾರ್ಷಲ್ ಎಸ್.ಪಿ. ಸಿಂಗ್, ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕ ಎಸ್.ಎನ್. ಚನ್ನಬಸಪ್ಪ, ರಾಜ್ಯ ಕಾರ್ಯದರ್ಶಿ ಹೆಚ್.ಸಿ. ತಮ್ಮೇಶ್ ಗೌಡ, ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.