ಬೆಂಗಳೂರು : ಬಿಹಾರ ಚುನಾವಣೆಯಲ್ಲಿ ಏನೇ ಫಲಿತಾಂಶ ಬಂದರೂ ಮತದಾರರ ತೀರ್ಪಿಗೆ ನಾವು ತಲೆಬಾಗುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದಅವರು, ಜನ ತಮ್ಮ ಆದೇಶ ನೀಡಿದ್ದು, ಅದನ್ನು ಪಾಠವಾಗಿ ಪರಿಗಣಿಸುತ್ತೇವೆ. ಮುಂದಿನ ಬಾರಿ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟಕ್ಕೆ ಹೊಸ ತಂತ್ರಗಾರಿಕೆ ರೂಪಿಸುತ್ತದೆ. ಎಂದು ತಿಳಿಸಿದ್ದಾರೆ.
ಬಿಹಾರದಲ್ಲಿ ಎನ್ಡಿಎ ಸರ್ಕಾರ ಮಹಿಳೆಯರ ಖಾತೆಗೆ 10 ಸಾವಿರ ಹಣ ಹಾಕಿದ್ದು, ಮಹಿಳೆಯರ ಮತ ಪ್ರಮಾಣ 11% ಏರಿಕೆಯಾಗಿದೆ. ಇದು ಫಲಿತಾಂಶಕ್ಕೆ ಕಾರಣವೇ ಎಂದು ಕೇಳಿದಾಗ, ನಾನು ಇನ್ನು ವಿವರವಾಗಿ ಪರಿಶೀಲನೆ ಮಾಡುತ್ತೇನೆ. ಆನಂತರ ಪ್ರತಿಕ್ರಿಯೆ ನೀಡುತ್ತೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ತುಂಗಭದ್ರಾ ಐಸಿಸಿ ಸಭೆ ಬಗ್ಗೆ ಕೇಳಿದಾಗ, ʼತುಂಗಭದ್ರಾ ಅಣೆಕಟ್ಟಿನ ಗೇಟ್ಗಳ ದುರಸ್ತಿ ನಡೆಯುವವರೆಗೂ ಇರುವ ನೀರನ್ನು ಹೇಗೆ ಸದುಪಯೋಗಪಡಿಸಿಕೊಳ್ಳಬೇಕು ಎಂಬ ವಿಚಾರದ ಬಗ್ಗೆ ಅವರಿಗೆ ತೀರ್ಮಾನ ಮಾಡಲು ಬಿಟ್ಟಿದ್ದೇವೆ. ಉಳಿದಂತೆ ಕಾಲುವೆಗಳ ದುರಸ್ತಿ ಕಾಮಗಾರಿ ಕೈಗೆತ್ತಿಕೊಳ್ಳಲು ತೀರ್ಮಾನಿಸಿದ್ದೇವೆʼ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಇದನ್ನೂ ಓದಿ : BBK 12 : ಕ್ಯಾಪ್ಟನ್ ಪಟ್ಟಕ್ಕೇರಿದ್ದ ಮಾಳು ನಿಪನಾಳ್ ಜೈಲಿಗೆ | ನಾಮಿನೇಟ್ ಮಾಡಿದ್ದೇ ಮುಳುವಾಯ್ತಾ?



















