ಬೆಂಗಳೂರು: ನಗರದಲ್ಲಿ ನಾವು ರಸ್ತೆಗುಂಡಿಗಳನ್ನು ಮುಚ್ಚಲು ಪ್ರಯತ್ನ ಪಡುತ್ತಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಸಮಸ್ಯೆಗಳನ್ನು ಬಗೆಹರಿಸಲು ಇದ್ದೇವೆ ಆದರೆ ಬಿಜೆಪಿಯವರು ರಾಜಕೀಯ ಮಾಡಲು ಇದ್ದಾರೆ ಎಂದು ಬಿಜೆಪಿ ನಾಯಕರ ಟೀಕೆಗೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಕೆಶಿ ತಿರುಗೇಟು ನೀಡಿದ್ದಾರೆ.
ಸಿಎಂ ಕೂಡ ರಸ್ತೆ ಗುಂಡಿಗಳನ್ನು ಮುಚ್ಚಲು ಸೂಚಿಸಿದ್ದಾರೆ. ಸಮಸ್ಯೆಗಳನ್ನು ಪರಿಹರಿಸಲು ಕ್ರಮವಹಿಸಲಾಗುತ್ತದೆ. ಆದರೆ ವಿಪಕ್ಷಗಳು ರಾಜಕೀಯ ಮಾಡುತ್ತಿದೆ. ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಇದೆ. ಈಗಾಗಲೇ ಗುಂಡಿಗಳ ಪತ್ತೆ ಹಚ್ಚಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜನರಿಗೂ ಕೂಡ ಗುಂಡಿ ಬಗ್ಗೆ ಮಾಹಿತಿ ಕೊಡಲು ಸೂಚನೆ ನೀಡಲಾಗಿದೆ. ಆದಷ್ಟೂ ಬೇಗ ಗುಂಡಿ ಮುಚ್ಚುವ ಕೆಲಸ ಆಗುತ್ತದೆ ಎಂದು ತಿಳಿಸಿದ್ದಾರೆ
ಯಾವುದೇ ಗುಂಡಿಗಳು ಇರಬಾರದು. ಯಾರೂ ಕೂಡ ರಸ್ತೆ ಗುಂಡಿಯನ್ನು ಮಾಡುವುದಿಲ್ಲ, ಬಯಸುವುದೂ ಇಲ್ಲ. ಹೆಚ್ಚು ಮಳೆ ಹಾಗೂ ಟ್ರಾಫಿಕ್ನಿಂದ ರಸ್ತೆ ಗುಂಡಿಗಳು ಆಗುತ್ತವೆ. 7 ಸಾವಿರಕ್ಕೂ ಹೆಚ್ಚು ರಸ್ತೆ ಗುಂಡಿ ಮುಚ್ಚಿದ್ದೇವೆ. ಇನ್ನೂ 5 ಸಾವಿರ ರಸ್ತೆ ಗುಂಡಿ ಬಾಕಿ ಇವೆ. ಪೊಲೀಸರಿಗೂ ಹಾಗೂ ಸಾರ್ವಜನಿಕರಿಗೂ ರಸ್ತೆ ಗುಂಡಿ ಬಗ್ಗೆ ಮಾಹಿತಿ ಕೊಡಲು ತಿಳಿಸಿದ್ದೇವೆ. ರಾಜಕೀಯ ಮಾಡುವವರು ರಾಜಕೀಯ ಮಾಡಲಿ, ನಾವು ಏನೂ ಹೇಳಲು ಆಗುವುದಿಲ್ಲ. ನಮ್ಮ ಬಳಿ ಪರಿಹಾರ ಇದೆ. ನಾವೂ ಬಿಜೆಪಿ ಶಾಸಕರ ಕ್ಷೇತ್ರಕ್ಕೂ ತಾರತಮ್ಯ ಮಾಡದೇ ಅನುದಾನ ಕೊಟ್ಟಿದ್ದೇವೆ. ಈಗಲೂ ಕೂಡ 25 ಕೋಟಿ ಅನುದಾನ ಕೊಟ್ಟಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.


















