ಅಂದು ರಾಷ್ಟ್ರದಲ್ಲಿ 40 ಕೋಟಿ ಜನರು ಇದ್ದರು. ಅವರೆಲ್ಲ ಒಂದಾಗಿ ಸ್ವಾಂತ್ರ್ಯ ಪಡೆದರು. ಈಗ ನಾವು 140 ಕೋಟಿ ಜನರಿದ್ದೇವೆ. ನಾವೆಲ್ಲ ಒಂದಾಗಬೇಕಿದೆ. ಸ್ವಾತಂತ್ರ್ಯದ ಮೊದಲು 40 ಕೋಟಿ ದೇಶವಾಸಿಗಳು ಉತ್ಸಾಹ ತೋರಿಸಿದರು. ಸಂಕಲ್ಪದೊಂದಿಗೆ ಮುನ್ನುಗ್ಗಿದ್ದರು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
78ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದ ನಮ್ಮ ಪೂರ್ವಜರ ರಕ್ತ ನಮ್ಮಲ್ಲಿ ಹರಿಯುತ್ತಿದೆ. ನಾವು 140 ಕೋಟಿ ಜನರಿದ್ದೇವೆ. ನಾವೆಲ್ಲರೂ ಒಂದೇ ಅಂಕಲ್ಪ, ನಾವೆಲ್ಲರೂ ಒಂದೇ ಎಂಬ ಮನೋಭಾವದಿಂದ ಮುನ್ನಡೆದರೆ ಖಂಡಿತವಾಗಿ ನಮ್ಮ ಮುಂದೆ ಬರುವ ಯಾವುದೇ ಸವಾಲನ್ನು ಎದುರಿಸುವ ಶಕ್ತಿ ನಮಗೆ ತಿಳಿಯುತ್ತದೆ ಎಂದು ಹೇಳಿದ್ದಾರೆ.
ತಮ್ಮ ಜೀವನದುದ್ದಕ್ಕೂ ಹೋರಾಡಿದ ಭಾರತಮಾತೆಯ ಅಸಂಖ್ಯಾತ ಭಕ್ತರಿಗೆ ಗೌರವ ಸಲ್ಲಿಸುವ ಹಬ್ಬವಾಗಿದೆ. ನಮ್ಮ ರೈತರು, ಸೈನಿಕರು ಮತ್ತು ಯುವಕರ ಸ್ವಾತಂತ್ರ್ಯದ ಬಗೆಗಿನ ಧೈರ್ಯ ಮತ್ತು ಭಕ್ತಿ ಜಗತ್ತಿಗೆ ಸ್ಪೂರ್ತಿದಾಯಕ ಘಟನೆಯಾಗಿದೆ. ವಿಶ್ವದ ಕೌಶಲ್ಯ ರಾಜಧಾನಿಯಾಗಬೇಕು. ಭಾರತವು ಜಾಗತಿಕ ಉತ್ಪಾದನಾ ಕೇಂದ್ರವಾಗಬೇಕು. ಭಾರತೀಯ ವಿಶ್ವವಿದ್ಯಾಲಯಗಳು ಜಾಗತಿಕವಾಗಬೇಕು. ಭಾರತೀಯ ಮಾಧ್ಯಮಗಳು ಜಾಗತಿಕವಾಗಬೇಕು. ಭಾರತ ಆದಷ್ಟು ಬೇಗ ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಸ್ವಾವಲಂಬಿಯಾಗಬೇಕು ಎಂದು ಹೇಳಿದ್ದಾರೆ.
10 ವರ್ಷಗಳಲ್ಲಿ ದೇಶದ ಯುವಕರ ಕನಸುಗಳಿಗೆ ರೆಕ್ಕೆಪುಕ್ಕ ಬಂದಿದೆ ಎಂದರು. ನಮ್ಮ ಸುಧಾರಣೆಗಳ ಪ್ರಕ್ರಿಯೆಯು ಯಾವುದೇ ಬಲವಂತದ ಅಡಿಯಲ್ಲಿಲ್ಲ. ನಾವು ರಾಜಕೀಯ ಬಲವಂತದಿಂದ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ರಾಜಕೀಯ ಲೆಕ್ಕಾಚಾರದ ಮೇಲೆ ನಿರ್ಧಾರಗಳನ್ನು ತೆಗೆದುಕೊಳ್ಳುವುದಿಲ್ಲ. ನಮಗೆ ಒಂದೇ ಒಂದು ನಿರ್ಣಯವಿದೆ – ಮೊದಲು ರಾಷ್ಟ್ರದ ಹಿತಾಸಕ್ತಿ ಎಂದು ಹೇಳಿದ್ದಾರೆ.