ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಶದಲ್ಲಿರುವ ನಟ ಮಡೆನೂರು ಮನು(Madenur Manu) ಪೊಲೀಸರ ಎದುರು ಹಲವು ವಿಷಯಗಳನ್ನು ಬಾಯಿ ಬಿಟ್ಟಿದ್ದಾರೆ ಎನ್ನಲಾಗಿದೆ.
ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಹಾಸನದಿಂದ ಬೆಂಗಳೂರಿಗೆ ಕರೆತಂದಿದ್ದಾರೆ. ಅತ್ಯಾಚಾರ ಅಲ್ಲ, ಒಪ್ಪಂದದ ಸಂಪರ್ಕ. ನಾನು ನಟಿಯನ್ನು ಮದುವೆಯಾಗಿದ್ದೇನೆ. ನಾನು ಅವಳಿಗೆ ಹಿಂಸೆ ನೀಡಿಲ್ಲ. ಅವಳೇ ನನಗೆ ಹಿಂಸೆ ನೀಡಿದ್ದಾಳೆ ಎಂದು ತನ್ನ ಬಳಿಯಿರುವ ಸಾಕ್ಷ್ಯಗಳನ್ನು ಕೂಡ ನೀಡಿದ್ದಾರೆ ಎನ್ನಲಾಗಿದೆ. ಆದರೆ, ಆಕೆ ಬೇರೊಬ್ಬರ ಮಾತು ಕೇಳಿ ಹೀಗೆ ಮಾಡಿದ್ದಾಳೆ. ಇಬ್ಬರೂ ಹೀರೋ, ಒಬ್ಬಳು ಲೇಡಿ ಡಾನ್ ಮಾತು ಕೇಳಿ ಹೀಗೆ ದೂರು ದಾಖಲಿಸಿದ್ದಾಳೆ ಎಂದು ಆರೋಪಿಸಿದ್ದಾರೆ ಎನ್ನಲಾಗಿದೆ.
ಸಂಭಾವನೆ ನೀಡುವ ನೆಪದಲ್ಲಿ ಬಂದು ನನ್ನ ಮೇಲೆ ಕಾಮಿಡಿ ಕಿಲಾಡಿ ಖ್ಯಾತಿಯ ಮಡೆನೂರು ಮನು ಅತ್ಯಾಚಾರ (Rape) ಎಸಗಿದ್ದಾನೆ ಎಂದು ಆರೋಪಿಸಿ ಸಹ ಕಲಾವಿದೆ ದೂರು ನೀಡಿದ್ದರು. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಆರೋಪಿ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.