ನವದೆಹಲಿ: ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತವು ಪಾಕಿಸ್ತಾನದ ಮೇಲೆ ವೈಮಾನಿಕ ದಾಳಿ ನಡೆಸಿದೆ. ಇದಕ್ಕೆ ಆಪರೇಷನ್ ಸಿಂಧೂರ್ (Operation Sindoor) ಎಂದು ಹೆಸರಿಡಲಾಗಿತ್ತು. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ.
ಪ್ರಧಾನಿ ಮೋದಿ ಇಂದು ಸಚಿವ ಸಂಪುಟ ಸಭೆ ನಡೆಸಿದ್ದು, ಅದರಲ್ಲಿ ದಾಳಿ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಭಾರತೀಯ ಸೇನೆಯು ಯಾವುದೇ ಪೂರ್ವಸಿದ್ಧತೆಯಿಲ್ಲದೆ ಮತ್ತು ಯಾವುದೇ ತಪ್ಪಿಲ್ಲದೆ ಕಾರ್ಯಾಚರಣೆ ನಡೆಸಿದೆ. ಇದು ನಮಗೆ ಹೆಮ್ಮೆಯ ಕ್ಷಣ ಎಂದು ಶ್ಲಾಘಿಸಿದ್ದಾರೆ. ಈ ವೇಳೆ ಕೇಂದ್ರ ಸಚಿವ ಸಂಪುಟದ ಸದಸ್ಯರು ಮೋದಿ ನಾಯಕತ್ವದ ಬಗ್ಗೆ ಹೊಗಳಿ, ಇಡೀ ದೇಶ ಅವರೊಂದಿಗೆ ಇದೆ ಎಂದರು.
ಸಂಪುಟ ಸಭೆಯಲ್ಲಿದ್ದ ಎಲ್ಲರಿಗೂ ರಾಜನಾಥ್ ಸಿಂಗ್ ಆಪರೇಷನ್ ಸಿಂಧೂರ್ ಬಗ್ಗೆ ಮಾಹಿತಿ ನೀಡಿದ್ದಾರೆ. ತಡರಾತ್ರಿಯಲ್ಲಿ ಭಾರತವು ಪಾಕಿಸ್ತಾನದಲ್ಲಿರುವ ಒಟ್ಟು ಒಂಬತ್ತು ಭಯೋತ್ಪಾದಕ ಅಡಗುತಾಣಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಲ್ಲಿ ಮುರಿಡ್ಕೆಯಲ್ಲಿರುವ ಲಷ್ಕರ್-ಎ-ತೊಯ್ಬಾ ಪ್ರಧಾನ ಕಚೇರಿ, ಬಹಾವಲ್ಪುರದಲ್ಲಿರುವ ಜೈಶ್-ಎ-ಮೊಹಮ್ಮದ್ ಲಾಂಚ್ ಪ್ಯಾಡ್ ಮತ್ತು ಇತರ ಸ್ಥಳಗಳು ಸೇರಿವೆ. ಕನಿಷ್ಠ 100 ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ ಎಂದಿದ್ದಾರೆ.


















