ಬಾಗಲಕೋಟೆ: ಕೋಡಿಮಠದ ಡಾ. ಶಿವಯೋಗಿ ಶಿವಾನಂದ ಸ್ವಾಮೀಜಿ (Kodimatha dr shivananda shivayogi Rajendra Swamiji) ಯುದ್ಧ ಸೇರಿದಂತೆ ಹಲವು ವಿಷಯಗಳ ಬಗ್ಗೆ ಭವಿಷ್ಯ ನುಡಿದಿದ್ದಾರೆ.
ಶ್ರೀಗಳು ಯುದ್ಧ ಆಗುವ ಸಾಧ್ಯತೆ ದಟ್ಟವಾಗಿದೆ ಎಂದು ಭವಿಷ್ಯ ನುಡಿದಿದ್ದಾರೆ. ಯುದ್ದ ಅಲ್ಲಗಳೆಯುವಂತಿಲ್ಲ. ಮತೀಯ ಮತಾಂಧತೆ ಗೊಂದಲ ಬಹಳ ಹೆಚ್ಚಾಗುತ್ತದೆ. ಲ್ಲಿ ಸಾವು ನೋವುಗಳು ಹೆಚ್ಚಾಗುತ್ತದೆ. ಯುದ್ದ ಮಾಡುವವರು ತಯಾರಿದ್ದಾರೆ. ಯುದ್ದ ಮಾಡಿಸಿಕೊಳ್ಳುವವರು ಹೆದರುತ್ತಿದ್ದಾರೆ. ಎದುರಾಳಿ ಕೂಡ ಹಾಗೆ ಇರಬೇಕು ತಾನೆ ಎದುರಾಳಿ ಬೆಚ್ಚಿದಾಗ ಯಾರ ಮೇಲೆ ಯುದ್ದ ಮಾಡೋದು ಎಂದಿದ್ದಾರೆ.
ಜಗತ್ತಿನಾದ್ಯಂತ. ಜಲ ಸುನಾಮಿ, ವಾಯುಸುನಾಮಿ, ಭೂಸುನಾಮಿ,ಅಗ್ನಿಸುನಾಮಿ. ವಿಪರೀತ ಹೀಟಿನಿಂದ ಜನ ಬಾಳೋದೆ ಕಷ್ಟ. ಒಲೆ ಹತ್ತಿ ಉರಿದರೆ ನಿಲ್ಲಬಹುದು. ಧರೆ ಹತ್ತಿದರೆ ಏನು ಮಾಡೋದು. ಸಮುದ್ರ ಉಕ್ಕುತ್ತದೆ. ಗಾಳಿಯಿಂದ ಅನೇಕ ಸಾವು- ನೋವುಗಳು ಸಂಭವಿಸುತ್ತವೆ ಎಂದಿದ್ದಾರೆ.
ಅರಸನ ಅರಮನೆಗೆ ಕಾರ್ಮೋಣ ಕವಿದೀತು.ಮತ್ತೊಮ್ಮೆ ಸಾಮೂಹಿಕ ಹತ್ಯೆಯಾಗುವ ಲಕ್ಷಣವಿದೆ. ನೀರು ಉಕ್ಕಿ ಬರುತ್ತದೆ. ಬಿಸಿಲು ಉಕ್ಕಿ ಬರುತ್ತದೆ. ಗಾಳಿ ಉಕ್ಕಿ ಬರುತ್ತದೆ. ಬೆಂಕಿಯಿಂದ ಜನ ತತ್ತರಿಸಿ ಹೋಗುತ್ತಾರೆ ಎಂದಿದ್ದಾರೆ.