ಬೆಂಗಳೂರು: ಸಚಿವ ಶಿವಾನಂದ ಪಾಟೀಲ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಕುರಿತು ಸ್ಪೀಕರ್ ಯು.ಟಿ. ಖಾದರ್ ಮಾತನಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯತ್ನಾಳ್ ಅವರು ಇನ್ನೂ ರಾಜೀನಾಮೆ ಸಲ್ಲಿಸಿಲ್ಲ. ಹೀಗಾಗಿ ಶಿವಾನಂದ ಪಾಟೀಲ್ ಅವರ ರಾಜೀನಾಮೆ ಪತ್ರ ಅಂಗೀಕರಿಸಿಲ್ಲ. ಈ ಕುರಿತು ಕನ್ನಡ ಹಾಗೂ ಇಂಗ್ಲೀಷ್ನಲ್ಲಿ ಅಧಿಕೃತ ಪ್ರಕಟಣೆ ಹೊರಡಿಸಿ ಅದನ್ನು ಸ್ಪೀಕರ್ ಓದಿ ಹೇಳಿದರು.
ಪಹಲ್ಗಾಮ್ ಉಗ್ರರ ದಾಳಿಯ ನಂತರ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ಯತ್ನಾಳ್ ವಾಗ್ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಸಚಿವ ಶಿವಾನಂದ ಪಾಟೀಲ್ ಹಾಗೂ ಹುನಗುಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಅವರಿಗೆ ಯತ್ನಾಳ್, ಇಬ್ಬರು ರಾಜೀನಾಮೆ ನೀಡಿ ನನ್ನ ವಿರುದ್ಧ ಚುನಾವಣೆಗೆ ನಿಲ್ಲಲಿ. ಅಲ್ಲದೇ, ಕೆಲವು ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದರು.
ಯತ್ನಾಳ್ ಸವಾಲನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡ ಕೃಷಿ ಮಾರುಕಟ್ಟೆ ಶಿವಾನಂದ ಪಾಟೀಲ್, ಇಂದು ರಾಜೀನಾಮೆ ಸಲ್ಲಿಸಿದ್ದಾರೆ. ಯತ್ನಾಳ್ ರಾಜೀನಾಮೆ ಸಲ್ಲಿಸಿದ ನಂತರ ತಮ್ಮ ರಾಜೀನಾಮೆ ಸ್ವೀಕರಿಸುವಂತೆ ಸವಾಲು ಹಾಕಿದ್ದಾರೆ.
ಈ ವಿಚಾರವಾಗಿ ಮಾತನಾಡಿರುವ ಖಾದರ್, ಶಿವಾನಂದ ಪಾಟೀಲ್ ಅವರು ತಮ್ಮ ಅಚಲ ನಿರ್ಧಾರಕ್ಕೆ ಹೆಸರಾಗಿದ್ದಾರೆ. ರಾಜ್ಯವೇ ಹೆಮ್ಮೆ ಪಡುವ ನಾಯಕರಾಗಿದ್ದಾರೆ. ಶಿವಾನಂದ ಪಾಟೀಲ್ ನನ್ನನ್ನು ವೈಯಕ್ತಿಕವಾಗಿ ಭೇಟಿ ಮಾಡಿದರು. ಷರತ್ತು ಬದ್ಧ ರಾಜೀನಾಮೆಯನ್ನು ಅಂಗೀಕರಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದೇನೆ ಎಂದಿದ್ದಾರೆ.
ಜೀವ ಬೆದರಿಕೆ ಆರೋಪದ ವಿಚಾರವಾಗಿ ಮಾತನಾಡಿದ ಅವರು, ಹಿಂದೆ ನಾನು ಪ್ರತಿಪಕ್ಷದಲ್ಲಿದ್ದಾಗ ಬೆದರಿಕೆ ಬಂದಿತ್ತು. ಹಿಂದೆ ನನಗೆ ಬಸವರಾಜ್ ಬೊಮ್ಮಾಯಿ ಅವರು ಭದ್ರತೆ ಒದಗಿಸಿದ್ದರು. ಈಗೇನಿಲ್ಲ ಎಂದಿದ್ದಾರೆ.
ಅಲ್ಲದೇ, ಶಿವಾನಂದ ಪಾಟೀಲ್ 6 ಬಾರಿ ಶಾಸಕರಾಗಿದ್ದವರು. ಹಿರಿಯ ರಾಜಕೀಯ ನಾಯಕರಾಗಿದ್ದಾರೆ. ಷರತ್ತು ಬದ್ಧ ರಾಜೀನಾಮೆ ನೀಡಿದ್ದಾರೆ. ಯತ್ನಾಳ್ ಇನ್ನೂ ರಾಜೀನಾಮೆ ನೀಡಿಲ್ಲ ಎಂದು ಸಚಿವ ಶಿವಾನಂದ ಪಾಟೀಲ್ ಗೆ ತಿಳಿಸಿದ್ದೇನೆ. ಹೀಗಾಗಿ ಶಿವಾನಂದ ಪಾಟೀಲರ ಅವರ ರಾಜೀನಾಮೆ ಅಂಗೀಕಾರ ಮಾಡಲು ಸಾಧ್ಯವಿಲ್ಲ. ಹೀಗಾಗಿ ನನಗೆ ರಾಜೀನಾಮೆ ನೀಡಿದರೂ ಅದನ್ನು ಪರಿಗಣಿಸಲು ಸಾಧ್ಯವಿಲ್ಲ ಎಂದಿದ್ದಾರೆ.