ಬೆಂಗಳೂರು : ರಾಜ್ಯ ಕಾಂಗ್ರೆಸ್ ಪಾಳೆಯದಲ್ಲಿ ಹನಿಟ್ರ್ಯಾಪ್ ವಿಚಾರ ದೊಡ್ಡ ವಿವಾದಕ್ಕೆ ಕಾರಣವಾಗುತ್ತಿದೆ. ಈ ಮಧ್ಯೆ ಇದು ಆಂತರಿಕ ಕಲಹಕ್ಕೆ ಕಾರಣವಾಗುತ್ತಿದೆ. ಈಗ ಡಿಕೆಶಿ ಹಲೋ ಹೇಳಿಕೆಗೆ ಎಂ.ಬಿ. ಪಾಟೀಲ್ ಕೂಡ ತಿರುಗೇಟು ನೀಡಿದ್ದಾರೆ.
ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರಿಗೆ ಯಾರೇ ಹಲೋ ಎಂದರೂ ಅವರು ಹಲೋ ಎನ್ನುವುದಿಲ್ಲ. ಬದಲಿಗೆ ವಾಟ್ಎನ್ನುತ್ತಾರೆ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.
ಕೆಲವರಿಗೆ ಸುಮ್ಮನೇ ಟ್ರ್ಯಾಪ್ ಮಾಡೋ ಉದ್ದೇಶ ಇರುತ್ತದೆ. ರಾಜಣ್ಣ ಅವರು ಹಿರಿಯ ಸದಸ್ಯರು. ಅವರ ಸ್ವಭಾವ ನನಗೆ ಗೊತ್ತಿದೆ. ಅವರ ಬಳಿ ಕಮ್, ಬಾ, ಹಲೋ, ಗಿಲೋ ನಡೆಯುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ಹನಿಟ್ರ್ಯಾಪ್ ಯಾರ ಮೇಲೆಯಾದರೂ ಆದರೂ ಅದು ತಪ್ಪು. ಬಿಜೆಪಿಯವರ ಮೇಲೆ ಆದರೂ ಮಾಡಿದವರ ವಿರುದ್ಧ ಕ್ರಮವಾಗಬೇಕು. ಹನಿಟ್ರ್ಯಾಪ್ ವಿಚಾರದಲ್ಲಿ ಯಾರೇ ಓನರ್ ಆಗಿರಲಿ, ಪ್ರೊಡ್ಯೂಸರ್, ಡೈರೆಕ್ಟರ್, ಕ್ಯಾಮೆರಾಮೆನ್, ಆ್ಯಕ್ಟರ್ ಆಗಿರಲಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಿದೆ ಎಂದು ಸಚಿವರು ಕಿಡಿಕಾರಿದ್ದಾರೆ.