ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಸಚಿವ ಸಂಪುಟ ಸಭೆಯಲ್ಲಿ ಏನೆಲ್ಲ ಆಯಿತು?

June 23, 2025
Share on WhatsappShare on FacebookShare on Twitter

ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಈ ವೇಳೆ ಹಲವು ವಿಷಯಗಳ ಬಗ್ಗೆ ನಿರ್ಣಯ ತೆಗೆದುಕೊಳ್ಳಲಾಯಿತು.

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಅಪರ ನಿಬಂಧಕರು (ವಿಚಾರಣೆಗಳು) ಹುದ್ದೆಗೆ ರಮಾಕಾಂತ ಚವ್ಹಾಣ, ನಿವೃತ್ತ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರನ್ನು ನೇಮಕ ಮಾಡಲು ಸಚಿವ ಸಂಪುಟ ನಿರ್ಧರಿಸಿದೆ.

ಅಪ್ಸರಕೊಂಡ- ಮುಗಲಿ ಕಡಲ ವನ್ಯ ಜೀವಿಧಾಮ
ಅರಣ್ಯ, ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆಯಡಿ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಸಮುದ್ರ ತೀರದ 6 ಕಿ.ಮೀ ವರೆಗಿನ ಪ್ರದೇಶ ಹಾಗೂ ಅರಣ್ಯ ಪ್ರದೇಶವನ್ನೊಳಗೊಂಡಂತೆ ಒಟ್ಟು 5959.322 ಹೆಕ್ಟೇರ್ ಪ್ರದೇಶವನ್ನು ಅಪ್ಸರಕೊಂಡ- ಮುಗಲಿ ಕಡಲ ವನ್ಯ ಜೀವಿಧಾಮ ಎಂದು ಘೋಷಿಸಲು ಸಚಿವ ಸಂಪುಟ ನಿರ್ಧರಿಸಿದೆ.

ಕಡಲ ವನ್ಯಜೀವಿ ಧಾಮದಲ್ಲಿ ಸಾಂಪ್ರದಾಯಿಕ ಮೀನುಗಾರಿಕೆ ಹಾಗೂ ಮೀನುಗಾರರ ದೋಣಿಗ ಪ್ರವೇಶಕ್ಕೆೆ ನಿರ್ಭಂಧವಿಲ್ಲ. ಅಲ್ಲಿನ ಜನರ ಅಸ್ತಿತ್ವದಲ್ಲಿರುವ ಹಕ್ಕುಗಳಿಗೆ ಯಾವುದೇ ನಿರ್ಭಂಧವಿಲ್ಲ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ 8.21 ಕಿ.ಮೀ ಸಮುದ್ರ ತೀರದ ಆರು ಕಿ.ಮೀ ಸಮುದ್ರದವರೆಗಿನ ಪ್ರದೇಶ ಹಾಗೂ 835 ಹೆಕ್ಟೇರ್ ಅರಣ್ಯ ಪ್ರದೇಶವನ್ನು ಒಳಗೊಂಡಂತೆ ಅಪ್ಸರಕೊಂಡ ಮುಗಲಿ ಕಡಲ ವನ್ಯ ಜೀವಿಧಾಮ ಎಂದು ಘೋಷಿಸಲಾಗಿದೆ. ನೀರನ ಜೀವಿಗಳ ರಕ್ಷಣೆಯ ಪ್ರಮುಖ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದರು.

ಸರ್ಕಾರಿ ನೌಕರರಿಗೆ ನಗದು ರಹಿತ ಆರೋಗ್ಯ ಯೋಜನೆಗೆ ಅನುಮೋದನೆ
ಸರ್ಕಾರಿ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಮತ್ತು ಗೌರವಧನದ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಸುಮಾರು 3 ಲಕ್ಷ ಸಿಬ್ಬಂದಿಗಳು ಮತ್ತು ಅವರ ಅವಲಂಬಿತರಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಮೂಲಕ ವಾರ್ಷಿಕವಾಗಿ 5.00 ಲಕ್ಷಗಳವರೆಗೆ ನಗದು ರಹಿತ ಆರೋಗ್ಯ ಯೋಜನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಸಿಬ್ಬಂದಿಗಳಿಂದ ಮಾಸಿಕ 100 ರೂ.ಗಳ ವಂತಿಗೆ ಮತ್ತು ಸರ್ಕಾರದಿಂದ ಉಳಿಕೆ ಹಣವನ್ನು ಭರಿಸಲು ನಿರ್ಧರಿಸಿದೆ.

ಎ.ಆರ್.ಎಸ್ : ನಾಮನಿರ್ದೇಶನ ಮಾಡುವ ಅಧಿಕಾರದಲ್ಲಿನ ಬದಲಾವಣೆ
ಕರ್ನಾಟಕ ನೋಂದಣಿ ಸಂಘಗಳ ಕಾಯ್ದೆ 1960ರ ಪ್ರಕಾರ ಸಂಘಗಳಾಗಿ ನೋಂದಾಯಿಸಲಾದ ಆರೋಗ್ಯ ರಕ್ಷಾ ಸಮಿತಿಗಳು (ಎ.ಆರ್.ಎಸ್) ಆಡಳಿತ/ ಸಾಮಾನ್ಯ ಸಭೆಯ ಸದಸ್ಯರನ್ನು ನಾಮನಿರ್ದೇಶನ ಮಾಡುವ ಅಧಿಕಾರದಲ್ಲಿನ ಬದಲಾವಣೆ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಸ್ಪೋಕ್ ಯೋಜನೆಯ 12.87 ಕೋಟಿಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ
ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಪಾಶ್ವವಾಯು ಮತ್ತು ತಲೆಗೆ ತೀವ್ರ ಪೆಟ್ಟಾದ ರೋಗಿಗಳ ಆರೈಕೆಗಾಗಿ ಹಬ್ ಮತ್ತು ಸ್ಪೋಕ್ ಮಾದರಿಯಲ್ಲಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಮೊದಲ ಹಂತದಲ್ಲಿ ಸ್ಪೋಕ್ ಆಗಿ ಕಾರ್ಯನಿರ್ವಹಿಸುವ ಯೋಜನೆಯ 12.87 ಕೋಟಿಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಮರುನಾಮಕರಣ

ಕಂದಾಯ ಇಲಾಖೆಯಡಿ ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕಿನ ಬಸಾಪೂರ ಗ್ರಾಮದ ಹೆಸರನ್ನು ಗೇರುಗುಟ್ಟ ಬಸಾಪೂರ ಎಂದು ಮರುನಾಮಕರಣ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಆನರು ಮೊದಲಿನಿಂದ ಗೇರುಗುಡ್ಡ ಬಸಾಪೂರ ಎಂದು ಕರೆಯುತ್ತಿದ್ದ ಹಿನ್ನೆಲೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಚಿವ ಹೆಚ್. ಕೆ.ಪಾಟೀಲ್ ತಿಳಿಸಿದರು.

ಅನುಭವ ಮಂಟಪ ನಿರ್ಮಾಣ: ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ

ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಅನುಭವ ಮಂಟಪ ನಿರ್ಮಾಣ ಕಾಮಗಾರಿಯ 742 ಕೋಟಿಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆಯನ್ನು ನೀಡಿದೆ. 612 ಕೋಟಿ ರೂ.ಗಳ ವೆಚ್ಚವಿತ್ತು. ಒಂದು ವರ್ಷದೊಳಗೆ ಕಾಮಗಾರಿ ಪೂರ್ಣಗೊಳಿಸಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

23.51 ಕೋಟಿಗಳ ಅಂದಾಜು ಮೊತ್ತದ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ

ರಾಜ್ಯ ವಿಪತ್ತು ಉಪಶಪನ ನಿಧಿಯಡಿ ಅನುಮೋದಿಸಿರುವ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನ ಶಿಲಹಳ್ಳಿ ಗ್ರಾಮದ ಬಳಿ ಕೃಷ್ಣಾ ನದಿಯ ಉಪನದಿಗೆ ಅಡ್ಡಲಾಗಿ ಹೈಲೆವೆಲ್ ಮೈನರ್ ಸೇತುವೆ ನಿರ್ಮಾಣ ಹಾಗೂ ಹುಬ್ಬಳ್ಳಿ ನಗರದ ರಾಜನಾಲಾಗೆ ತಡೆಗೋಡೆ ನಿರ್ಮಾಣ ಮಾಡುವ ಒಟ್ಟು 23.51 ಕೋಟಿಗಳ ಅಂದಾಜು ಮೊತ್ತದ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಗ್ರಂಥಾಲಯ ನಿರ್ಮಿಸಲು ರಿಯಾಯಿತಿ ದರದಲ್ಲಿ ನಿವೇಶನ

ನಗರಾಭಿವೃದ್ಧಿ ಇಲಾಖೆಯಡಿ ರಾಯಚೂರು ಜಿಲ್ಲಾ ಕುರುಬರ ಸಂಘಕ್ಕೆ ಕನಕದಾಸ ಸಾರ್ವಜನಿಕ ಗ್ರಂಥಾಲಯ ನಿರ್ಮಿಸಲು ರಾಯಚೂರು ನಗರದ ಸಿಯತಲಾಬ್ ಬಡಲಾವಣೆಯಲ್ಲಿ ರಾಯಚೂರು ಮಹಾನಗರ ಪಾಲಿಕೆಗೆ ಸೇರಿದ 1200 ಚದರ ಅಡಿ ಅಳತೆಯ ಖಾಲಿ ನಿವೇಶನವನ್ನು ಶೇ 50 ರಷ್ಟು ರಿಯಾಯಿತಿ ದರದಲ್ಲಿ ಮಂಜೂರು ಮಾಡುವ ಬಗ್ಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಕನಕನಾಲಾ ಆಧುನೀಕರಣ ಯೋಜನೆಗೆ ಆಡಳಿತಾತ್ಮಕ ಅನುಮೋದನೆ

ಜಲಸಂಪನ್ಮೂಲ ಇಲಾಖೆಯಡಿ ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲ್ಲೂಕಿನ ಆರ್ಯಭೋಗಪುರ ಗ್ರಾಮದ ಬಳಿ ಮಸ್ಕಿನಾಲಾದಿಂದ ಕನಕನಾಲಾ ಕಣಿವೆಗೆ ಪ್ರವಾಹದ ನೀರನ್ನು ತಿರುಗಿಸಲು ಮಸ್ಕಿನಾಲೆಯ ಮೇಲ್ಭಾಗದಲ್ಲಿ ಬ್ರಿಡ್ಜ್ –ಕಂ ಬ್ಯಾರೇಜ್ ನಿರ್ಮಿಸಲು ಮತ್ತು ಕನಕನಾಲಾ ಆಧುನೀಕರಣ ಯೋಜನೆಯ 134.56 ಕೋಟಿಗಳ ಅಂದಾಜು ಮೊತ್ತದ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಹಿನ್ನೀರಿನ ಮೇಲ್ಭಾಗದಲ್ಲಿರುವ ಬಾಧಿತ ಅಚ್ಚುಕಟ್ಟು ಪ್ರದೇಶಗಳಾದ ಆರ್ಯಭೋಗಾಪುರ, ಮುದಲಗುಂಡಿ, ವನರಳ್ಳಿ, ಕಿಲನೂರು, ಕಲ್ಮಳ್ಳಿ, ಅಮರಾಪುರ ತಾಂಡಾಗಳು ಕಿಲ್ಲರಹಟ್ಟಿ ಗ್ರಾಮಗಳಿಗೆ ಅನುಕೂಲ ಕಲಗಪಿಸುವ ಉದ್ದೇಶದಿಂದ ಈ ಯೋಜನೆಯನ್ನು ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.

ವಿಯರ್ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ

ರಾಯಚೂರು ತಾಲ್ಲೂಕಿನ ಸಿಂಧನೂರು ತಾಲ್ಲೂಕಿನ ಚನ್ನಬಸವೇಶ್ವರ (ಒಳಬಳ್ಳಾರಿ) ಏತ ನೀರಾವರಿ ಯೋಜನೆಯ ಜಾಕ್ ವೆಲ್ ಹತ್ತಿರ ತುಂಗಭದ್ರಾ ನದಿಗೆ ಅಡ್ಡಲಾಗಿ ವಿಯರ್ ನಿರ್ಮಾಣ ಮಾಡುವ 43.10 ಕೋಟಿಗಳ ಅಂದಾಜು ಮೊತ್ತದ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಪ್ರಾಥಮಿಕ ಆರೋಗ್ಯ ಆರೈಕೆ ಸೇವೆಗಳ ಅನುಷ್ಠಾನಕ್ಕೆ ನಿರ್ಣಯ

ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆಯಡಿ ರಾಜ್ಯದ ದುರ್ಗಮ ಪ್ರದೇಶದ ಸಂಪರ್ಕ ರಹಿತ ಪ್ರದೇಶಗಳಿಗೆ ಪ್ರಾಥಮಿಕ ಆರೋಗ್ಯ ಆರೈಕೆ ಸೇವೆಗಳನ್ನು 15.97 ಕೋಟಿ ಗಳ ಅಂದಾಜು ವೆಚ್ಚದಲ್ಲಿ ಅನುಷ್ಠಾನ ಮಾಡಲು ಸಚಿವ ಸಂಫುಟ ನಿರ್ಧರಿಸಿದೆ. ಇದು ರಾಜ್ಯದಲ್ಲಿನ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ನೀಡಲು ಸಂಚಾರಿ ಆರೋಗ್ಯ ಘಟಕಗಳನ್ನು ಎಂಹೆಚ್‌ಯು ಅನುಷ್ಠಾನಕ್ಕೆ ನಿರ್ಣಯ ಮಾಡಿದೆ.

ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರ ಸಮುದಾಯಕ್ಕೆ ಶೇ 15 ರಷ್ಟು ಮೀಸಲಾತಿ ಹೆಚ್ಚಳ

ವಸತಿ ಇಲಾಖೆಯಡಿ ರಾಜ್ಯಾದ್ಯಂತ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಸತಿ ಇಲಾಖೆ ಅನುಷ್ಠಾನಗೊಳಿಸಲಾಗುವ ವಿವಿಧ ವಸತಿ ಯೋಜನೆಗಳಡಿ ಅಲ್ಪಸಂಖ್ಯಾತ ಸಮುದಾಯದವರಿಗೆ ನಿಗದಿ ಪಡಿಸಿರುವ ಶೇ 10 ರ ಮೀಸಲಾತಿಯನ್ನು 15% ಗೆ ಹೆಚ್ಚಿಸಲು ನಿರ್ಣಯ ಮಾಡಲಾಗಿದೆ. ಕೇಂದ್ರ ಸರ್ಕಾರದವರು ಅಲ್ಪಸಂಖ್ಯಾತರಿಗೆ ಕೊರತೆಯಿದ್ದ ವಸತಿಯನ್ನು ಗಮನಿಸಿ ಸೂಚನೆ ನೀಡಿದೆ. ನಮ್ಮ ಸರ್ಕಾರವು ಈ ಸಮುದಾಯದವರ ವಸತಿರಹಿತರನ್ನು ಹಾಗೂ ಸಾಮಾಜಿಕ ನ್ಯಾಯವನ್ನು ಗಮನದಲ್ಲಿರಿಸಿಕೊಂಡು ಮೀಸಲಾತಿ ಹೆಚ್ಚಿಸಲಾಗಿದೆ.

ಮಾವು ಬೆಳೆಗಾರರಿಗೆ ಪರಿಹಾರಕ್ಕೆ ಕೇಂದ್ರವನ್ನು ಒತ್ತಾಯಿಸಲು ಕೃಷಿ ಸಚಿವರಿಗೆ ಸೂಚನೆ

ಮಾವು ಬೆಳೆಗಾರರ ವಿಚಾರವಾಗಿ ಸಚಿವ ಸಂಪುಟ ಸಭೆಯಲ್ಲಿ ಸುದೀರ್ಘ ಚರ್ಚೆಯಾಗಿದೆ. ಕೋಲಾರ, ಬೆಂಗಳೂರು ಗ್ರಾಮೀಣ ಭಾಗದವರು ಚರ್ಚಿಸಿದರು. ರೈತರಿಗೆ ಪರಿಹಾರ ನೀಡಲು ಕೋರಲಾಗಿ, ಮುಖ್ಯಮಂತ್ರಿಗಳು ಕೃಷಿ ಸಚಿವರಿಗೆ ಹಾಗೂ ಮುಖ್ಯ ಕಾರ್ಯದರ್ಶಿಗಳು ಕೇಂದ್ರ ಕೃಷಿ ಸಚಿವರೊಂದಿಗೆ ಚರ್ಚಿಸಲು ಸೂಚನೆ ನೀಡಿದ್ದಾರೆ. ಅಗತ್ಯ ಬಿದ್ದರೆ ಭೇಟಿ ನೀಡಲು ಹಾಗೂ ಸಾಧ್ಯವಾದಷ್ಟು ಹೆಚಿನ ಪರಿಹಾರವನ್ನು ನೀಡಲು ಕೇಂದ್ರವನ್ನು ಒತ್ತಾಯಿಸಬೇಕೆಂದು ಸೂಚನೆ ನೀಡಿದ್ದಾರೆ.
ಚಿತ್ತೂರು ಭಾಗದಲ್ಲಿ ರಾಜ್ಯದ ಮಾವಿನ ಹಣ್ಣುಗಳ ಪ್ರವೇಶಕ್ಕೆ ನಿರಾಕರಿಸಿರುವ ಬಗ್ಗೆ ಸಚಿವ ಕೆ.ಹೆಚ್.ಮುನಿಯಪ್ಪ ಪ್ರಸ್ತಾಪ ಮಾಡಿದರು ಎಂದು ತಿಳಿಸಿದರು.

ಜುಲೈ 17 ಕ್ಕೆ ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ
ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ಜುಲೈ 16-17 ರಂದು ನಿಗದಿಯಾಗಬಹುದು ಎಂದು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದರು. ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ಮುಂದೂಡಲು ಕಾರಣ ಕೇಳಿದ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಸಚಿವರು ಆ ಭಾಗದ ಕೆಲವು ಇಲಾಖೆಗಳಿಂದ ಪ್ರಸ್ತಾವನೆಗಳು ತಲುಪಿರಲಿಲ್ಲ. ಆ ಪ್ರದೇಶಕ್ಕೆ ಪರಿಣಾಮಕಾರಿಯಾಗಿ ಕೆಲಸಗಳು ಆಗಬೇಕು ಎಂಬ ಉದ್ದೇಶದಿಂದ ಮತ್ತು ಕೆಲವು ಸಚಿವರ ಕೋರಿಕೆಯ ಮೇರೆಗೆ ಮುಂದೂಡಲಾಯಿತು ಎಂದರು.

ಬಿಲ್ಲುಗಳ ಬಗ್ಗೆ ಚರ್ಚೆ
ಕರ್ನಾಟಕ ಕ್ರೌಡ್ ಕಂಟ್ರೋಲ್ ಮ್ಯಾನೇಜಿಂಗ್ ಕ್ರೌಡ್‌ಅಟ್ ಇವೆಂಟ್ಸ್ ಅಂಡ್ ವೆನ್ಯೂ, ಮಾಸ್ ಗ್ಯಾದರಿಂಗ್ ಬಿಲ್ 2025, ಕರ್ನಾಟಕ ರೋಹಿತ್ ವೆಮುಲಾ ಬಿಲ್ 2025, ಕರ್ನಾಟಕ ಮಿಸ್ ಇನ್ಫರರ್ಮೇಷನ್, ಫೇಕ್ ನ್ಯೂಸ್ ಪ್ರಾಹಿಬಿಷನ್ ಬಿಲ್ 2025, ಕರ್ನಾಟಕ ಹೇಟ್ ಸ್ಪೀಚ್ ಅಂಡ್ ಹೇಟ್ ಕ್ರೈಂ ಪ್ರೆವೆನ್ಶನ್ ಬಿಲ 2025 ಬಗ್ಗೆ ಪ್ರಸ್ತಾಪ ಮಾಡಲಾಗಿದ್ದು, ಕೆಲವು ಬಿಲ್ಲುಗಳಲ್ಲಿ ವಿವರವಾದ ಚರ್ಚೆಯಾಗಬೇಕೆಂದು ತೀರ್ಮಾನಿಸಿ ಮುಂದಿನ ಸಚಿವ ಸಂಪುಟಕ್ಕೆ ತರಲು ತೀರ್ಮಾನಿಸಲಾಗಿದೆ ಎಂದರು.

ಕೆ.ಎ.ಟಿ ವ್ಯವಸ್ಥೆಯ ಬಗ್ಗೆ ಸರ್ಕಾರದ ಚಿಂತನೆ
ಕೆ.ಎ.ಟಿ ಬಗ್ಗೆ ಸಾಕಷ್ಟು ಚರ್ಚೆ, ಆಕ್ರೋಶ ವ್ಯಕ್ತವಾಗಿದ್ದು, ಇದರ ವ್ಯವಸ್ಥೆ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ಮಾಡುತ್ತಿದೆ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು

Tags: Cabinet MeetingCM SiddaramaiagovernmentMarine Wildlife SanctuaryPolitician
SendShareTweet
Previous Post

ರಗಡ್ ಅವತಾರದಲ್ಲಿ ಅಜಯ್‌ ರಾವ್‌

Next Post

ರಾಹುಲ್ ಗಾಂಧಿ ಅವರ ಜನ್ಮದಿನ ಹಿನ್ನೆಲೆಯಲ್ಲಿ ಯುವ ಕಾಂಗ್ರೆಸ್ ವತಿಯಿಂದ ನೇತ್ರದಾನ ಶಿಬಿರ

Related Posts

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!
ಧಾರವಾಡ

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!
ರಾಜ್ಯ

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಇದು ಕೊತ್ವಾಲ್ ಸರ್ಕಾರ.. ನಮ್ಮನ್ನು ಕೊಲ್ಲಲು ಯತ್ನಿಸಿದೆ ; ಕಾಂಗ್ರೆಸ್‌ ವಿರುದ್ದ ಆರ್‌.ಅಶೋಕ್‌ ಆಕ್ರೋಶ!
ರಾಜಕೀಯ

ಇದು ಕೊತ್ವಾಲ್ ಸರ್ಕಾರ.. ನಮ್ಮನ್ನು ಕೊಲ್ಲಲು ಯತ್ನಿಸಿದೆ ; ಕಾಂಗ್ರೆಸ್‌ ವಿರುದ್ದ ಆರ್‌.ಅಶೋಕ್‌ ಆಕ್ರೋಶ!

KPCC ಕಚೇರಿಗೆ ಬಿಜೆಪಿ ಮುತ್ತಿಗೆ ಯತ್ನ – ಶಾಸಕ ಬಿಪಿ ಹರೀಶ್‌ ತಲೆಗೆ ಮೊಟ್ಟೆ ಎಸೆದ ‘ಕೈ’ ಕಾರ್ಯಕರ್ತರು
ರಾಜಕೀಯ

KPCC ಕಚೇರಿಗೆ ಬಿಜೆಪಿ ಮುತ್ತಿಗೆ ಯತ್ನ – ಶಾಸಕ ಬಿಪಿ ಹರೀಶ್‌ ತಲೆಗೆ ಮೊಟ್ಟೆ ಎಸೆದ ‘ಕೈ’ ಕಾರ್ಯಕರ್ತರು

ಉಂಡ ಮನೆಗೆ ಕನ್ನ ಹಾಕಿದ ಕೇರ್‌ಟೇಕರ್ ಅಂದರ್..!
ಬೆಂಗಳೂರು

ಉಂಡ ಮನೆಗೆ ಕನ್ನ ಹಾಕಿದ ಕೇರ್‌ಟೇಕರ್ ಅಂದರ್..!

ನೀಟ್ ವಿವಾದ : ಬೆಂಗಳೂರಲ್ಲಿ ಭಾರೀ ಹೈಡ್ರಾಮಾ.. ಬಿಜೆಪಿ ಕಚೇರಿ ಮುತ್ತಿಗೆಗೆ ಕಾಂಗ್ರೆಸ್​​ ಯತ್ನ!
ರಾಜಕೀಯ

ನೀಟ್ ವಿವಾದ : ಬೆಂಗಳೂರಲ್ಲಿ ಭಾರೀ ಹೈಡ್ರಾಮಾ.. ಬಿಜೆಪಿ ಕಚೇರಿ ಮುತ್ತಿಗೆಗೆ ಕಾಂಗ್ರೆಸ್​​ ಯತ್ನ!

Next Post
ರಾಹುಲ್ ಗಾಂಧಿ ಅವರ ಜನ್ಮದಿನ ಹಿನ್ನೆಲೆಯಲ್ಲಿ ಯುವ ಕಾಂಗ್ರೆಸ್ ವತಿಯಿಂದ ನೇತ್ರದಾನ ಶಿಬಿರ

ರಾಹುಲ್ ಗಾಂಧಿ ಅವರ ಜನ್ಮದಿನ ಹಿನ್ನೆಲೆಯಲ್ಲಿ ಯುವ ಕಾಂಗ್ರೆಸ್ ವತಿಯಿಂದ ನೇತ್ರದಾನ ಶಿಬಿರ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

Recent News

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat