ಬೆಂಗಳೂರು: ಕಾಲ್ತುಳಿತದ (Chinnaswamy Stampede)ಕ್ಕೂ ಮುನ್ನ ಸರ್ಕಾರ ಮೊಂಡುತನ ಪ್ರದರ್ಶನ ಮಾಡಿದೆ. ಪೊಲೀಸರು ನೀಡಿದ್ದ ಸೂಚನೆಯನ್ನು ಕಾಂಗ್ರೆಸ್ ಸರ್ಕಾರ (Congress Government) ಉಲ್ಲಂಘಿಸಿದೆ.
ಸಿಎಂ(Siddaramaiah) ಹಾಡೂ ಡಿಸಿಎಂ(DK Shivakumar) ಕಿತ್ತಾಟದಿಂದಾಗಿ ಅಮಾಯಕರು ಬಲಿಯಾಗುವಂತಾಯಿತು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದೆಡೆ ಅಮಾಯಕರು ಸಾಯುತ್ತಿದ್ದರೆ, ಡಿಸಿಎಂ ಇನ್ನೊಂದೆಡೆ ಕಪ್ಗೆ ಮುತ್ತಿಡುತ್ತಿದ್ದರು. ಮಧ್ಯಾಹ್ನವೇ ಮೊದಲ ಸಾವಾದಾಗ ಪೊಲೀಸರು ಮಾಹಿತಿ ನೀಡಿದ್ದರು. ಕಾರ್ಯಕ್ರಮ ಆರಂಭವಾದಾಗಲೇ 8 ಮಕ್ಕಳು ಸತ್ತಿದ್ದರು. ಆದರೂ ಕಾರ್ಯಕ್ರಮ ಮಾಡಿದರು. ಇವರೆಲ್ಲ ಕಟುಕರು, ಕಲ್ಲು ಹೃದಯದವರು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಲಾಖೆಯ ಸಿಬ್ಬಂದಿ ಹಾಗೂ ಕುಟುಂಬದವರು ಬರಬಾರದು ಎಂದು ಕೂಡ ಪೊಲೀಸರು ಸೂಚಿಸಿದ್ದರು. ಆದರೆ ಅಲ್ಲಿ ಎಲ್ಲರ ಕುಟುಂಬದವರು ಇದ್ದರು. ಸರ್ಕಾರ ಮಾಡಿದ ತಪ್ಪುಗಳ ಬಗ್ಗೆ ಜನರು ಪ್ರಶ್ನಿಸುತ್ತಿದ್ದರು. ಹೀಗಾಗಿ ವಿಶೇಷ ಅಧಿವೇಶನ ಕರೆದು ಚರ್ಚಿಸಬೇಕು. ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯಬೇಕಿದೆ. ಅಲ್ಲದೇ, ಸತ್ತವರ ಕುಟುಂಬಸ್ಥರಿಗೆ 1 ಕೋಟಿ ರೂ. ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.