ಬೆಂಗಳೂರ: ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ ಪ್ರಕಟವಾಗಿದೆ.
ಈ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಹಾಗೂ ಸಂಗಡಿಗರು 884 ಕೋಟಿ ರೂಪಾಯಿ ಅಕ್ರಮ ಎಸಗಿರುವುದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಸಿಬಿಐ ಕೋರ್ಟ್ , ಮಾಜಿ ಸಚಿವ, ಹಾಲಿ ಶಾಸಕ ಜನಾರ್ಧನ ರೆಡ್ಡಿಯನ್ನು (Gali Janardhan Reddy )ದೋಷಿ ಎಂದು ಸಿಬಿಐ ವಿಶೇಷ ನ್ಯಾಯಾಲಯ (CBI Special Court) 7 ವರ್ಷಗಳ ಜೈಲು ಶಿಕ್ಷೆ ಪ್ರಕಟಿಸಿದೆ.
ಏನಿದು ಪ್ರಕರಣ?
ಆಂಧ್ರ ಪ್ರದೇಶದಲ್ಲಿ ವೈ.ಎಸ್. ರಾಜಶೇಖರ ರೆಡ್ಡಿ ಹಾಗೂ ಕರ್ನಾಟಕದಲ್ಲಿ ಬಿ.ಎಸ್. ಯಡಿಯೂರಪ್ಪ ಸಿಎಂ ಆಗಿದ್ದ ಸಂದರ್ಭದಲ್ಲಿ ಓಬಳಾಪುರಂ ಅಕ್ರಮ ಗಣಿಕಾರಿಕೆ ಪ್ರಕರಣ ಬೆಳಕಿಗೆ ಬಂದಿತ್ತು. ಆಂಧ್ರ-ಕರ್ನಾಟಕದ ಗಡಿಗೆ ಹೊಂದಿಕೊಂಡ ಓಬಳಾಪುರಂ ಬೆಟ್ಟದಲ್ಲಿ ಅದಿರಿನ ಅಕ್ರಮ ಗಣಿಗಾರಿಕೆ ನಡೆದಿದೆ ಎಂಬ ಆರೋಪ ಕೇಳಿ ಬಂದಿತ್ತು. ಗಣಿಗಾರಿಕೆ ಮಂಜೂರಾತಿ ಸಂದರ್ಭದಲ್ಲಿ ಅರಣ್ಯ ಇಲಾಖೆ, ಗಣಿ ಇಲಾಖೆಯಿಂದ ಅಕ್ರಮ ಆಗಿದೆ ಎಂಬ ಆರೋಪ ಕೇಳಿ ಬಂದಿತ್ತು.
ಹೀಗಾಗಿ ಸಿಬಿಐ ತನಿಖೆ ಕೈಗೊಂಡಿತ್ತು. ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ 884 ಕೋಟಿ ಅಕ್ರಮ ಎಸಗಿರುವುದು ಈಗ ಸಾಬೀತಾಗಿದೆ. ಒಟ್ಟು 29 ಲಕ್ಷ ಟನ್ ಅದಿರು ಲೂಟಿ ಮಾಡಿರುವ ಆರೋಪ ಕೇಳಿ ಬಂದಿದೆ. ಈಗಾಗಲೇ ಇದೇ ಪ್ರಕರಣದಲ್ಲಿ ರೆಡ್ಡಿ ಮೂರುವರೆ ವರ್ಷ ಜೈಲು ಶಿಕ್ಷೆ ಅನುಭವಿಸಿ, ಈಗ ಜಾಮೀನಿನ ಮೇಲೆ ಹೊರ ಬಂದಿದ್ದರು. ಈಗ ಅದೇ ಪ್ರಕರಣದಲ್ಲಿ ಶಿಕ್ಷೆ ಪ್ರಕಟವಾಗಿದೆ.