ತಾಯಿಯ ಅನಾರೋಗ್ಯ ಹಿನ್ನೆಲೆಯಲ್ಲಿ ತವರಿಗೆ ಮರಳಿರುವ ಕೋಚ್ ಗೌತಮ್ ಗಂಭೀರ್ ಇಂಗ್ಲೆಡ್ ಗೆ ವಾಪಾಸ್ ಯಾವಾಗ ಆಗ್ತಾರೆ? ಎಂಬ ಮಾತುಗಳು ಕ್ರಿಕೆಟ್ ವಲಯದಲ್ಲಿ ಕೇಳಿ ಬರುತ್ತಿವೆ.
ಗಂಭೀರ್ ತಾಯಿಗೆ ತೀವ್ರ ಅನಾರೋಗ್ಯ ಉಂಟಾದ ಹಿನ್ನೆಲೆಯಲ್ಲಿ ಜೂನ್ 11ರಂದು ತುರ್ತಾಗಿ ಗಂಭೀರ್ ದೆಹಲಿಗೆ ವಾಪಸ್ ಆಗಿದ್ದರು. ಶುಕ್ರವಾರದಿಂದ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಆರಂಭವಾಗಲಿದೆ. ಈ ಹಿನ್ನಲೆಯಲ್ಲೇ ಇದೀಗ ಗಂಭೀರ್ ಟೆಸ್ಟ್ ಆರಂಭಕ್ಕೂ ಒಂದು ದಿನ ಮುಂಚೆ ಅಂದ್ರೆ ಗುರುವಾರದಂದು ಇಂಗ್ಲೆಂಡ್ ಗೆ ಮರಳಲಿದ್ದಾರೆ. ಈ ಬಗ್ಗೆ ಖುದ್ದು ಬಿಸಿಸಿಐ ಸ್ಪಷ್ಟಪಡಿಸಿದ್ದು, ಪರ್ಯಾಯ ಕೋಚ್ ಅವಶ್ಯಕತೆ ಇಲ್ಲಾ ಅಂತಾ ಅಭಿಪ್ರಾಯಪಟ್ಟಿದೆ.
ಮೊದಲ ಟೆಸ್ಟ್ ನಲ್ಲಿ ಆಡುವ 11 ಆಟಗಾರರ ಆಯ್ಕೆ ತೀವ್ರ ಕುತೂಹಲ ಕೆರಳಿಸಿದೆ. ಅದರಲ್ಲೂ ಅಭ್ಯಾಸ ಪಂದ್ಯದಲ್ಲೇ ದ್ವಿಶಕ ಸಿಡಿಸಿರುವ ಕನ್ನಡಿಗ ಕರುಣ್ ನಾಯರ್ ಗೆ ಅವಕಾಶ ಸಿಗುವ ಸಾಧ್ಯತೆಗಳಿವೆ. ಉಳಿದಂತೆ ಆಲ್ ರೌಂಡರ್ ಗಳಾದ ನಿತೀಶ್ ಕುಮಾರ್ ರೆಡ್ಡಿ ಮತ್ತು ಶಾರ್ದೂಲ್ ಠಾಕೂರ್ ನಡುವೆ ಬಿಗ್ ಫಾಟ್ ನಡೆದಿದೆ.