ಹಾಸನ: ಪ್ರಿಯಕರನೊಂದಿಗೆ ಪತ್ನಿ ಪರಾರಿಯಾಗಿರುವ ಹಿನ್ನೆಲೆಯಲ್ಲಿ ಪರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಹಾಸನ (Hassan) ಜಿಲ್ಲೆ ಹೊಳೆನರಸೀಪುರ (Holenarasipura) ತಾಲೂಕಿನ ಮಾಕವಳ್ಳಿ ಗ್ರಾಮದ ಹತ್ತಿರ ಈ ಘಟನೆ ನಡೆದಿದೆ. ಅರಕಲಗೂಡು ತಾಲೂಕಿನ ಹೊನ್ನವಳ್ಳಿ ಗ್ರಾಮದ ರವಿ (38) ಪತ್ನಿಯಿಂದಾಗಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಪತಿ. ರವಿಯ ಪತ್ನಿ ಕೆಲ ದಿನಗಳ ಹಿಂದೆ ಗಂಡನನ್ನು ಬಿಟ್ಟು ಮಗುವಿನೊಂದಿಗೆ ಹೊನ್ನವಳ್ಳಿ ಗ್ರಾಮದ ಪ್ರದೀಪ್ ಜೊತೆ ಪರಾರಿಯಾಗಿದ್ದಳು. ಹೀಗಾಗಿ ರವಿ ಮನನೊಂದು ದೂರು ಸಲ್ಲಿಸಿದ್ದ. ಪೊಲೀಸರು ಸರಿಯಾಗಿ ಸ್ಪಂದಿಸಿಲ್ಲ ಎಂದು ಎಸ್ಪಿಗೂ ದೂರು ನೀಡಿದ್ದ.
ಆದರೂ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು ಮನನೊಂದ ರವಿ ಶನಿವಾರ ಮಾಕವಳ್ಳಿ ಬಳಿ ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪೊಲೀಸರು ಹಾಗೂ ಅಗ್ನಿಶಾಮಕ ದಳದಿಂದ ರವಿಯ ಮೃತದೇಹಕ್ಕಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ. ಈ ಕುರಿತು ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.