ಬಾಗಲಕೋಟೆ: ವ್ಯಕ್ತಿಯೋರ್ವ ಅಡುಗೆ ಸರಿ ಮಾಡಿಲ್ಲ ಎಂಬ ಕಾರಣಕ್ಕೆ ಪತ್ನಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಬಾಗಲಕೋಟೆ (Balagalkot) ಜಿಲ್ಲೆಯ ಮುಧೋಳ (Mudhol) ತಾಲೂಕಿನ ಮುಗಳಖೋಡ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸಾಕ್ಷಿತಾ ವಾಳಕೆ (19) ಸಾವನ್ನಪ್ಪಿರುವ ದುರ್ದೈವಿ. ಬೀರಪ್ಪ ಪೂಜಾರಿ (21) ಕೊಲೆ ಮಾಡಿರುವ ಪತಿ. ಸಾಕ್ಷಿತಾ ವಾಳಕೆ ಮೂಲತಃ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ವಡಗೋಲ ಗ್ರಾಮದವರು. ಬೀರಪ್ಪ ಪೂಜಾರಿ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮುಗಳಖೋಡ ಗ್ರಾಮದವನು. ಇಬ್ಬರೂ ಪ್ರೀತಿಸಿ ಮದುವೆಯಾಗಿದ್ದರು.
ಆದರೆ, ಅಡುಗೆ ವಿಷಯಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಅಡುಗೆ ಸರಿ ಮಾಡಿಲ್ಲ ಎಂದು ಬೀರಪ್ಪ, ಪತ್ನಿಯ ಎದೆ ಮೇಲೆ ಕುಳಿತು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಗೃಹಿಣಿಯ ಕುಟುಂಬಸ್ಥರ ಆಕ್ರಂದನ ಸ್ಥಳದಲ್ಲಿ ಮುಗಿಲು ಮುಟ್ಟಿದೆ.