ಮೈಸೂರು: ವರದಕ್ಷಿಣೆ (Dowry) ಕಿರುಕುಳ ನೀಡಿದ್ದ ಪಾಪಿ ಪತಿಯೊಬ್ಬ ಪತ್ನಿಯ ಸಹೋದರನನ್ನೇ ಕೊಲೆ ಮಾಡಿರುವ ಘಟನೆ ನಡೆದಿದೆ.
ಈ ಘಟನೆ ಮೈಸೂರಿನ (Mysuru) ಕುವೆಂಪು ನಗರದಲ್ಲಿ (Kuvempu Nagar) ನಡೆದಿದೆ. ಅಭಿಷೇಕ್ (27) ಕೊಲೆಯಾದ ಅಣ್ಣ. ರವಿಚಂದ್ರ ಕೊಲೆ ಮಾಡಿದ ಪಾಪಿ. ರವಿಚಂದ್ರ ಜಿಮ್ ತೆರೆಯಲು 5 ಲಕ್ಷ ಹಣ ಕೇಳಿದ್ದ. ಹೀಗಾಗಿ ಪ್ರತಿ ದಿನವೂ ವರದಕ್ಷಿಣಿ ತರುವಂತೆ ಪತ್ನಿ ವಿದ್ಯಾಗೆ ಕಿರುಕುಳ ನೀಡುತ್ತಿದ್ದ. ಹೀಗೆ ಗಲಾಟೆ ಮಾಡುತ್ತಿದ್ದ ವೇಳೆ ವಿದ್ಯಾ ಅಣ್ಣನಿಗೆ ಕರೆ ಮಾಡಿದ್ದಾಳೆ. ವಿದ್ಯಾ ಅಣ್ಣ ಅಭಿಷೇಕ್ ಮನೆಗೆ ಬರುತ್ತಿದ್ದಂತೆ ಬಾಗಿಲು ಹಾಕಿ ರವಿಚಂದ್ರ ಏಕಾಏಕಿ ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾನೆ. ಈ ವೇಳೆ ಅಭಿಷೇಕ್ ತಾಯಿ ಭಾಗ್ಯಮ್ಮ, ತಂಗಿಗೂ ಹಲ್ಲೆ ನಡೆಸಿದ್ದಾನೆ. ತೀವ್ರ ರಕ್ತಸ್ರಾವವಾದ ಪರಿಣಾಮ ಅಭಿಷೇಕ್ ಸಾವನ್ನಪ್ಪಿದ್ದಾರೆ.
4 ವರ್ಷಗಳ ಹಿಂದೆ ವರದಕ್ಷಿಣೆ ನೀಡಿಯೇ ಭಾಗ್ಯರನ್ನು ಮದುವೆ ಮಾಡಿದ್ದರು. ಆದರೂ ರವಿಚಂದ್ರನ್ ಮಾತ್ರ ಹಣಕ್ಕಾಗಿ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಆದರೆ, ಈ ಧನದಾಹ ಈಗ ಕೊಲೆಯಲ್ಲಿ ಅಂತ್ಯವಾಗಿದೆ. ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.