ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟ ವನ್ಯಧಾಮದಲ್ಲಿ ಕಾಡುಹಂದಿ ಬೇಟೆಯಾಡುತ್ತಿದ್ದ ಓರ್ವ ಆರೋಪಿಯನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದು, ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ತಾಕೇರಿ ಗ್ರಾಮದ ಅನ್ವಿತ್ ಬಂಧಿತ ಆರೋಪಿಯಾಗಿದ್ದಾನೆ.

ಬಂಧನದ ವೇಳೆ ಪರಾರಿಯಾಗಲು ಯತ್ನಿಸಿದ ಅನ್ವಿತ್ನನ್ನು ತಡೆಯುವ ಸಂದರ್ಭದಲ್ಲಿ ಆತನ ಬಲಗಾಲಿಗೆ ಗುಂಡು ತಗುಲಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ದರ್ಶನ್, ಮಂಜ ಹಾಗೂ ಕಿರಣ್ ಎಂಬ ಮೂವರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ಅವರ ಬಂಧನಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಬಲೆ ಬೀಸಿದ್ದಾರೆ.
ಕಾರ್ಯಾಚರಣೆ ವೇಳೆ ಎರಡು ಮೃತ ಕಾಡುಹಂದಿಗಳು, ಮಚ್ಚು, ಟಾರ್ಪಲ್, ಟಾರ್ಚ್ ಹಾಗೂ ಒಂದು ಆಲ್ಟೋ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ಸಂಬಂಧ ಮಹದೇಶ್ವರ ಬೆಟ್ಟ ವನ್ಯಧಾಮದ ಅರಣ್ಯಾಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ : ವಾಹನ ಸವಾರರೇ ಗಮನಿಸಿ.. ಇಂದಿನಿಂದ ಆ. 5ರವರೆಗೆ ಪೀಣ್ಯ ಫ್ಲೈಓವರ್ ಬಂದ್!



















