ಚಿಕ್ಕಮಗಳೂರು : ಮಲೆನಾಡಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿದ್ದು, ಮನೆಯ ಬಳಿಯೇ ಒಂಟಿ ಸಲಗ ಪ್ರತ್ಯಕ್ಷವಾಗಿರುವ ಘಟನೆ ನಡೆದಿದೆ. ಮೂಡಿಗೆರೆ ತಾಲೂಕಿನ ದೇವನಗೂಲ್ ಗ್ರಾಮದಲ್ಲಿ ನಡೆದಿದೆ.
ರವಿ ಎಂಬುವವರ ಮನೆ ಬಳಿ ಒಂಟಿ ಸಲಗ ಓಡಾಟ. ರಾತ್ರಿ ವೇಳೆಯಲ್ಲಿ ಓಡಾಟ ನಡೆಸಿದೆ. ಮಲಯ ಮಾರುತ, ದೇವನಗೂಲ್ ಗುಡ್ಡ, ಕೊಟ್ಟಿಗೆಹಾರ ಸುತ್ತಮುತ್ತ ಪ್ರದೇಶಗಳಲ್ಲಿ ಕಾಡಾನೆ ಸಂಚಾರ ಹೆಚ್ಚಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಕಾಫಿ, ಮೆಣಸು ಹಾಗೂ ಬಾಳೆ ಬೆಳೆಗಳನ್ನು ಕಾಡಾನೆ ನಾಶಪಡಿಸಿರುವುದರಿಂದ ರೈತರಿಗೆ ಭಾರೀ ನಷ್ಟ ಉಂಟಾಗಿದೆ. ನಿರಂತರವಾಗಿ ಕಾಡಾನೆ ಸಂಚಾರದಿಂದ ಸ್ಥಳೀಯರು ಭಯಭೀತರಾಗಿದ್ದಾರೆ.
ಇನ್ನು ಕಾಡಾನೆ ಸೆರೆ ಹಿಡಿದು, ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ ಮಾಡುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಈ ಘಟನೆ ಮೂಡಿಗೆರೆ ವಲಯ ವ್ಯಾಪ್ತಿಯಲ್ಲಿ ನಡೆದಿದೆ.
ಇದನ್ನೂ ಓದಿ : ತಾಳೆ ಬೆಳೆಯಲ್ಲಿ ದಾಖಲೆ ಬರೆದ ಬೆಳಗಾವಿ ರೈತ!


















