ಬೆಂಗಳೂರು : ರಾಜ್ಯದಲ್ಲಿ ಮತ್ತೆ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆ ಇದ್ದು, ಈ ಬಗ್ಗೆ ಸ್ವತಃ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಸುಳಿವು ನೀಡಿದ್ದಾರೆ.
ನಮ್ಮ ರಾಜ್ಯದಲ್ಲಿ ಮಾತ್ರ ಕಡಿಮೆ ಬೆಲೆ ಇದೆ ಬೇರೆ ರಾಜ್ಯಗಳಲ್ಲಿ ಹಾಲಿನ ದರ ಇನ್ನೂ ಹೆಚ್ಚಿದೆ. ಹಾಲಿನ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿಲ್ಲ. ನಾವು ಮಂಡಳಿಗೆ ಮನವಿ ಸಲ್ಲಿಸಿದ್ದೇವೆ ಇಷ್ಟು ಅಂತ ದರದ ಬಗ್ಗೆ ಹೇಳಿಲ್ಲ. ಅರ್ಧ ಲೀಟರ್ ಮಾರಿದರೆ ನಷ್ಟವಾಗುತ್ತದೆ. ಒಂದು ಲೀಟರ್ ಹಾಲು ಮಾರಿದರೆ ಲಾಭ ಆಗುತ್ತದೆ ಎಂದು ಹೇಳಿದ್ದಾರೆ.
ಹಾಲಿನ ದರ ಹೆಚ್ಚಳ ಬಗ್ಗೆ ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಪರೋಕ್ಷವಾಗಿ ಸುಳಿವು ನೀಡಿದ್ದು, ಹಾಲಿನ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಿಲ್ಲ. ನಾವು ಮಂಡಳಿಗೆ ಮನವಿ ಸಲ್ಲಿಸಿದ್ದೇವೆ ಎಂದು ಹೇಳಿದ್ದಾರೆ.
ತುಪ್ಪದ ದರ ಇವತ್ತು ಏರಿಕೆ ಮಾಡಲಾಗಿದೆ. ಬೇರೆ ಕಂಪನಿಯ ಹಾಲು ಆನ್ಲೈನ್ ಮಾರ್ಕೆಟಿಂಗ್ ಜಾಸ್ತಿ ಆಗಿದ್ದು, ನಾವು ರೈತರಿಗೆ ಹಾಲು, ಕೂಡಲೇ ಹಣ ಕೊಡಬೇಕು. ಬೇರೆ ರಾಜ್ಯಗಳು ಹೆಚ್ಚು ಹಣ ಬಾಕಿ ಉಳಿಸಿಕೊಂಡಿಲ್ಲ ಅನ್ಸುತ್ತೆ ಎಂದು ಹಾಲಿನ ದರ ಏರಿಕೆ ಬಗ್ಗೆ ಪರೋಕ್ಷ ಸುಳಿವು ನೀಡಿದ್ದಾರೆ.
ನಮ್ಮಲ್ಲಿ 95 ಲಕ್ಷದಿಂದ 1 ಕೋಟಿ ಲೀಟರ್ ಹಾಲು ಉತ್ಪತ್ತಿಯಾಗುತ್ತದೆ. ಆದರೆ 50 ಲಕ್ಷ ಲೀಟರ್ ಹಾಲು ಮಾತ್ರ ಮಾರಾಟ ಆಗುತ್ತದೆ. ಸರ್ಕಾರ ಹಾಲಿನ ಮೇಲೆ ದರ ಹೆಚ್ಚಳ ಮಾಡಿರುವ 4 ರೂಪಾಯಿಯನ್ನ ರೈತರಿಗೆ ಕೊಡಲು ಸೂಚಿಸಿದ್ದೇವೆ. 50 ಲಕ್ಷ ಲೀಟರ್ ಮಾರಾಟ ಮಾಡುವುದಕ್ಕೆ ಮಾತ್ರ ನಮಗೆ ಹಣ ಬರುತ್ತಿದೆ. ಉಳಿದ 50 ಲಕ್ಷ ಲೀಟರ್ ಹಾಲಿಗೆ ನಮ್ಮ ಕೈಯಿಂದ ರೈತರಿಗೆ ಹಣ ಕೊಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : ಮಣ್ಣಲ್ಲಿ ಮಣ್ಣಾದ ಕಾಂಗ್ರೆಸ್ ಹಿರಿಯ ಶಾಸಕ ಹೆಚ್.ವೈ.ಮೇಟಿ | ಅಂತ್ಯಕ್ರಿಯೆಗೆ ಹರಿದುಬಂದ ಜನಸಾಗರ



















