ಬೆಂಗಳೂರು : ಸುರಕ್ಷತೆಗಳಿಲ್ಲದೇ ಮ್ಯಾನ್ಹೋಲ್ಗೆ ಇಳಿದಿದ್ದ ಮೂವರು ಕಾರ್ಮಿಕರು ಅಸ್ವಸ್ಥಗೊಂಡಿರುವ ಘಟನೆ ಬೆಂಗಳೂರು ನಗರದ ನೀಲಸಂದ್ರದ ಜಾನ್ಸನ್ ಮಾರ್ಕೆಟ್ ಬಳಿ ನಡೆದಿದೆ. ಮೂವರ ಪೈಕಿ ಒಬ್ಬನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಬೆಳಗ್ಗೆ 11 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಅನಿಲದ ದುರ್ವಾಸನೆಗೆ ಕಾರ್ಮಿಕರು ಮ್ಯಾನ್ಹೋಲ್ ಸಿಲುಕಿ ಅಸ್ವಸ್ಥಗೊಂಡಿದ್ದಾರೆ. ಬಳಿಕ ಹೋಲ್ನಲ್ಲಿ ಒದ್ದಾಡುತ್ತಿದ್ದ ಕಾರ್ಮಿಕರನ್ನ ಸ್ಥಳೀಯರು ಮೇಲೆತ್ತಿದ್ದು, ಆಸ್ಪತ್ರೆಗೆ ದಾಖಲಿಸಿದ್ದಾರೆ. ಸುತ್ತಮುತ್ತಲಿನವರ ಸಮಯಪ್ರಜ್ಞೆಯಿಂದ ಕಾರ್ಮಿಕರ ಜೀವ ಉಳಿದಿದೆ.

ಕಳೆದೆರೆಡು ದಿನಗಳಿಂದ ಡ್ರೈನೇಜ್ ಬ್ಲಾಕ್ ಆಗಿತ್ತು. ಇದರಿಂದ ಜಲಮಂಡಳಿಗೆ ದೂರು ನೀಡಲಾಗಿತ್ತು. ಬೆಳಗ್ಗೆ ಬಂದ ಸಿಬ್ಬಂದಿ ಪರಿಶೀಲನೆಗೆ ಮುಂದಾಗಿದ್ದಾರೆ. ಈ ವೇಳೆ ಮ್ಯಾನ್ ಹೋಲ್ನಿಂದ ಬಂದ ಗ್ಯಾಸ್ನಿಂದ ಇಬ್ಬರು ಒಳಗೆ ಬಿದ್ದು ಅಸ್ವಸ್ಥರಾಗಿದ್ದಾರೆ. ಅವರನ್ನ ಕಾಪಡಲು ಹೋದ ಮತ್ತೊಬ್ಬರಿಗೂ ಅದೇ ರೀತಿ ಆಗಿದೆ. ಕೂಡಲೇ ಸ್ಥಳೀಯರು ಅವರನ್ನ ರಕ್ಷಣೆ ಮಾಡಿ, ಆಸ್ಪತ್ರೆಗೆ ಸೇರಿಸಿದ್ದಾರೆ.
ಸದ್ಯ ಇಬ್ಬರು ಆರೋಗ್ಯವಾಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಇನ್ನು ಈ ಘಟನೆಗೆ ಜಲಮಂಡಳಿ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ : ನಟಿ ಶಿಲ್ಪಾ ಶೆಟ್ಟಿ ತಾಯಿ ಆಸ್ಪತ್ರೆಗೆ ದಾಖಲು.. ಆಗಿದ್ದೇನು?



















