ಯಾದಗಿರಿ : ಕೇಕ್ ಬದಲಿಗೆ ರೈತರು ಬೆಳೆದ ಹಣ್ಣು, ತರಕಾರಿ ಕತ್ತರಿಸಿ ರೈತನು ವಿಭಿನ್ನವಾಗಿ ವರ್ಷದ ಕೊನೆಯ ದಿನವನ್ನು ಆಚರಿಸಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.
ಶ್ರೀ ಹನುಮಾನ್ ಟ್ರಸ್ಟ್ನಿಂದ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವರ್ಷದ ಕೊನೆಯ ದಿನವನ್ನು ಆಚರಿಸುತ್ತಿದ್ದಾರೆ. ಎಣ್ಣೆ ಪಾರ್ಟಿ, ಪ್ರಾಣಿ ಬಲಿಯಂತಹ ದುಷ್ಕೃತ್ಯಕ್ಕೆ ಬಾಯ್ ಹೇಳಿ, ಈ ರೀತಿ ರೈತರು ಬೆಳೆದ ಹಣ್ಣು, ತರಕಾರಿ ಕತ್ತರಿಸಿ ಆಚರಿಸಿ ಎಂದು ತಿಳಿಸಿದ್ದಾರೆ.
ನ್ಯೂ ಇಯರ್ ಸೆಲೆಬ್ರೇಷನ್ ಹೆಸರಲ್ಲಿ ಯುವಕರು ದುಷ್ಚಟಕ್ಕೆ ದಾಸರಾಗುತ್ತಾರೆ. ಹೀಗಾಗಿ ಮದ್ಯಕ್ಕೆ ಬಾಯ್ ಹೇಳಿ, ಕಬ್ಬಿನ ಹಾಲು ಕುಡಿದು ಆಚರಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ. ಜೊತೆಗೆ ಚಿಕನ್, ಮಟನ್ ಬದಲಿಗೆ ತರಕಾರಿ, ಹಣ್ಣು ಸೇವಿಸುವಂತೆ ಕೇಳಿಕೊಂಡಿದ್ದಾರೆ.
ಇದನ್ನೂ ಓದಿ : ಮಂಡ್ಯ | ಕಾವೇರಿ ನದಿ ದಂಡೆಯಲ್ಲಿ ಹೊಸ ವರ್ಷಾಚರಣೆಗೆ ಖಾಕಿ ಬ್ರೇಕ್



















