ನೆಲಮಂಗಲ: ರಸ್ತೆ ಗುಂಡಿ ತಪ್ಪಿಸಲು ಹೋಗಿ ಟೆಕ್ಕಿಯೊಬ್ಬರು ಲಾರಿ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿರುವ ಘಟನೆ ಮಾದನಾಯಕನಹಳ್ಳಿ ಹುಸ್ಕೂರು ಎಪಿಎಂಸಿ ಬಳಿ ನಡೆದಿದೆ.
ಪ್ರಿಯಾಂಕ (26) ಮೃತ ಟೆಕ್ಕಿ. ಅಣ್ಣನ ಜೊತೆ ಬೈಕ್ನಲ್ಲಿ ಎಪಿಎಂಸಿ ಹುಸ್ಕೂರು ರಸ್ತೆಯಿಂದ ಮಾದಾವರಕ್ಕೆ ತೆರಳುತ್ತಿದ್ದರು. ಈ ವೇಳೆ ಅಪಘಾತ ನಡೆದಿದೆ.

ರಸ್ತೆ ಕಾಮಗಾರಿಯಿಂದ ಈ ರಸ್ತೆ ಹದಗೆಟ್ಟಿದ್ದು, ಗುಂಡಿ ತಪ್ಪಿಸಲು ಪ್ರಿಯಾಂಕ ಸಹೋದರ ಯತ್ನಿಸಿದ್ದಾರೆ. ಈ ವೇಳೆ ಮುಂದೆ ಬಂದ ಲಾರಿ ಕೆಳಗೆ ಯುವತಿ ಬಿದ್ದಿದ್ದಾರೆ. ಈ ವೇಳೆ ಲಾರಿ ಯುವತಿಯ ತಲೆ ಮೇಲೆ ಹರಿದಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



















